ರಾಜಕೀಯಕ್ಕೆ ಮತ್ತೋರ್ವ ಸ್ಯಾಂಡಲ್ ವುಡ್ ನಟಿ ಎಂಟ್ರಿ.? | Filmibeat Kannada
  • 6 years ago
ಚಿತ್ರರಂಗಕ್ಕೂ ಹಾಗೂ ರಾಜಕೀಯಕ್ಕೂ ಎಲ್ಲಿಲ್ಲದ ನಂಟು. ರಾಜಕೀಯದವ್ರು ಸಿನಿಮಾಗೆ ಬರೋದು, ಸಿನಿಮಾರಂಗದವ್ರು ರಾಜಕೀಯ ಪ್ರವೇಶ ಮಾಡೋದು ಕಾಮನ್ ಆಗಿ ಹೋಗಿದೆ. ಇತ್ತೀಚೆಗಷ್ಟೇ ರಿಯಲ್ ಸ್ಟಾರ್ ಉಪ್ಪಿ ತಮ್ಮದೇ ಪಕ್ಷದ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಅದರ ಬೆನ್ನಲ್ಲೇ ಮತ್ತೋರ್ವ ಸ್ಯಾಂಡಲ್ ವುಡ್ ನಟಿ ಪಾಲಿಟಿಕ್ಸ್ ಗೆ ಬರ್ತಾರೆ ಅನ್ನೋ ಸುದ್ದಿ ಹರಿದಾಡ್ತಿದೆ. 'ಚೆಲುವಿನ ಚಿತ್ತಾರ' ಸಿನಿಮಾದ ಮೂಲಕ ಸಿನಿಮಾರಂಗದಲ್ಲಿ ನಾಯಕಿಯಾಗಿ ಗುರುತಿಸಿಕೊಂಡ ನಟಿ ಅಮೂಲ್ಯ ರಾಜಕೀಯಕ್ಕೆ ಎಂಟ್ರಿಕೊಡ್ತಾರಾ ಅನ್ನೋ ಸುದ್ದಿ ಹರಿದಾಡ್ತಿದೆ. ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೇ ಜಗದೀಶ್.ಆರ್.ಚಂದ್ರ ಅವ್ರ ಕೈ ಹಿಡಿದ ಅಮೂಲ್ಯ ಅಭಿನಯದ ಕೊನೆಯ ಸಿನಿಮಾ 'ಮಾಸ್ತಿ ಗುಡಿ'.. ಅಮೂಲ್ಯ ರಾಜಕೀಯಕ್ಕೆ ಬರ್ತಾರಾ ಎನ್ನುವ ಒಂದು ಸುದ್ದಿ ಸದ್ಯ ರಾಜಕೀಯ ವಲಯದಲ್ಲಿ ಹಾಗೂ ಗಾಂಧಿನಗರದಲ್ಲಿ ಹರಿದಾಡ್ತಿದೆ. ಕಾರಣ ಇಷ್ಟೇ... ಇತ್ತೀಚಿನ ದಿನಗಳಲ್ಲಿ ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Politicians have come to the cinema, the cinema is politically accessible and has become commonplace, Recently Real Star Uppi entered politics through his own party.,.watch this video
Recommended