ಗುಜರಾತ್ ಹಾಗು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ | Oneindia Kannada

  • 6 years ago
BJP President B S Yeddyurappa speaks about BJP's victory in Gujarat & Himachal Pradesh. Watch Video to know more.


ಈ ವರ್ಷದಲ್ಲಿ ಬಿಜೆಪಿಗೆ ಅತಿ ದೊಡ್ಡ ಗೆಲುವಿನ ಉಡುಗೊರೆ ನೀಡಿದ್ದು ಉತ್ತರ ಪ್ರದೇಶ. ಮುನ್ನೂರಕ್ಕೂ ಹೆಚ್ಚು ಶಾಸಕರನ್ನು ಜತೆಯಲ್ಲಿಟ್ಟುಕೊಂಡು ಅಲ್ಲಿ ರಾಜ್ಯಭಾರ ನಡೆಸುತ್ತಿದ್ದಾರೆ ಯೋಗಿ ಆದಿತ್ಯನಾಥ್. ಆ ನಂತರ ಉತ್ತರಾಖಂಡದಲ್ಲಿ ಕೇಸರಿ ಪಕ್ಷ ಗೆಲುವು ಸಾಧಿಸಿತು. ಮಣಿಪುರ ಮತ್ತು ಗೋವಾದ ಸರಕಾರ ರಚಿಸಿತು. ಪಂಜಾಬ್ ನಲ್ಲಿ ಅಮರಿಂದರ್ ಸಿಂಗ್ ತಂದ ಗೆಲುವು ಕಾಂಗ್ರೆಸ್ ಪಾಳಿನ ಸಮಾಧಾನಕರ ಬಹುಮಾನ.ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, 'ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಗುಜರಾತ್-ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಸಾಧಿಸಿರುವ ಮುನ್ನಡೆಯೇ ಸಾಕ್ಷಿ. ಕರ್ನಾಟಕದಲ್ಲಿಯೂ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಲಿದೆ. ನಾಳೆಯಿಂದ ಕಾಂಗ್ರೆಸ್, ಜೆಡಿಎಸ್‌ನ ರಾಜ್ಯ, ತಾಲೂಕು, ಜಿಲ್ಲಾ ಮಟ್ಟದ ನಾಯಕರು ಬಿಜೆಪಿ ಕಡೆಗೆ ಆಗಮಿಸಲಿದ್ದಾರೆ ಎಂದು ಹೇಳಿದರು.

Recommended