ಅನಂತ್ ಕುಮಾರ್ ಹೆಗಡೆಗೆ ವಾರ್ನಿಂಗ್ ಕೊಟ್ಟ ಬಿ ಎಸ್ ಯಡಿಯೂರಪ್ಪ | Filmibeat Kannada

  • 6 years ago
Central minister Ananth Kumar Hegde warned not to give such statement, said BJP state president BS Yeddyurappa in an interview with news channel.

"ಅಂಥ ಹೇಳಿಕೆಗಳನ್ನು ನಾನು ಒಪ್ಪೋದಿಲ್ಲ. ಆ ರೀತಿ ಮಾತನಾಡಬೇಡಿ ಅಂತ ಅನಂತಕುಮಾರ್ ಹೆಗಡೆ ಅವರಿಗೆ ಎಚ್ಚರಿಕೆ ನೀಡಲಾಗಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ಅನಂತಕುಮಾರ್ ಹೆಗಡೆ ಪದೇ ಪದೇ ಪ್ರಚೋದನಾಕಾರಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಆ ರೀತಿ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದ್ದೇವೆ ಹಾಗೂ ಅವರು ಕೂಡ ಸಂಸತ್ ನಲ್ಲಿ ಈ ಬಗ್ಗೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ್ದಾರೆ.



Recommended