ಚಿಕ್ಕಬಳ್ಳಾಪುರ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಸಂದರ್ಶನ | Oneindia Kannada
  • 6 years ago
ಕರ್ನಾಟಕ ಕಾಂಗ್ರೆಸ್ಸಿನ ಯುವ ಮುಖಂಡರಲ್ಲೊಬ್ಬರು ಡಾ. ಸುಧಾಕರ್ ಕೆ. ರಾಜಕೀಯಕ್ಕೆ ಎಂಟ್ರಿ ಕೊಡುವ ಮುನ್ನ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸುಧಾಕರ್, ಕಳೆದ ಚುನಾವಣೆಯಲ್ಲಿ ಗೆದ್ದು ಪ್ರಥಮ ಪ್ರಯತ್ನದಲ್ಲೇ ಯಶಸ್ಸನ್ನು ಪಡೆದಿದ್ದರು. 2008 - 2010ರ ಅವಧಿಯಲ್ಲಿ ಕೆಪಿಸಿಸಿ ಸೆಕ್ರೆಟರಿಯಾಗಿದ್ದ ಡಾ. ಸುಧಾಕರ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲೂ ಭಾಗವಹಿಸಿದ್ದರು. ಮುಂದಿನ ತಿಂಗಳು ನಡೆಯಲಿರುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟಿನಿಂದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸುಧಾಕರ್, 'ಒನ್ ಇಂಡಿಯಾ' ಜೊತೆ ಪ್ರಸಕ್ತ ಚುನಾವಣೆ ಮತ್ತು ಇತರ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅವರ ಸಂದರ್ಶನದ ಆಯ್ದ ಭಾಗ ಇಂತಿದೆ.
Recommended