ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಬಿಜೆಪಿ ಹಿರಿಯ ಶಾಸಕರು..? | Oneindia kannada

  • 5 years ago
ಮೊದಲ ಹಂತದ ಸಚಿವ ಸಂಪುಟ ರಚನೆಯಾಗಿ ಮೂರು ದಿನಗಳ ಬಳಿಕ ಖಾತೆ ಹಂಚಿಕೆಯಾದ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮಗೆ ಸ್ವಲ್ಪ ನಿರಾಳತೆ ಸಿಗಲಿದೆ ಎಂದು ಭಾವಿಸಿದ್ದರು. ಆದರೆ, ಖಾತೆ ಹಂಚಿಕೆ ಇನ್ನಷ್ಟು ಬಿಕ್ಕಟ್ಟು ಸೃಷ್ಟಿಸಿದೆ. ಸಚಿವ ಸ್ಥಾನ ಸಿಗದೆ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಈಗ ಹಂಚಿಕೆಯಾಗಿರುವ ಖಾತೆ ಬಗ್ಗೆ ಅಸಮಾಧಾನ ಸ್ಫೋಟಗೊಂಡಿದೆ. ಮುಖ್ಯವಾಗಿ ಪ್ರಮುಖ ನಾಯಕರೇ ಸಿಡಿದೆದ್ದಿದ್ದಾರೆ. ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Senior leaders of Karnataka BJP are unhappy on the party for not considering them for Deputy Chief Minister post.

Recommended