ಯಡಿಯೂರಪ್ಪ ಮೇಲೆ ಬೇಸರಗೊಂಡ ಬಿಜೆಪಿ ಶಾಸಕರು | YEDIYURAPPA | BJP | ONEINDIA KANNADA

  • 4 years ago
ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ತೀವ್ರವಾಗಿದೆ. ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕೆಲವು ಸಚಿವ ಸ್ಥಾನಗಳು ಖಾಲಿ ಉಳಿದಿದ್ದವು. ಅವುಗಳ ಮೇಲೆ ಸಚಿವ ಸ್ಥಾನದ ಆಕಾಂಕ್ಷಿಗಳು ಕಣ್ಣಿಟ್ಟಿದ್ದರು. ಉಪ ಚುನಾವಣೆ ಬಳಿಕ ಗೆದ್ದ ಶಾಸಕರ ಜತೆಗೆ ಸಂಪುಟದೊಳಗೆ ಸೇರಿಕೊಳ್ಳಲು ತಮಗೂ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅವರ ಆಸೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಣ್ಣೀರೆರಚಿದ್ದಾರೆ.

Chief Minister BS Yediyurappa on Tuesday said, MLAs who won in the by elections only will get ministership during this month's cabinet expansion.

Recommended